ಗ್ವಾಲಿಯರ್: ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
‘ಗ್ವಾಲಿಯರ್–ಚಂಬಲ್ ಪ್ರದೇಶದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂದು ಸಿಂಧಿಯಾ ಪಕ್ಷ ತ್ಯಜಿಸಿದ ಬಳಿಕ ಜನ ಹೇಳುತ್ತಿದ್ದರು. ಆದರೆ ನಾನು ಹೇಳುತ್ತೇನೆ, ಅವರು ಪಕ್ಷ ತ್ಯಜಿಸಿದ ಬಳಿಕ ಕಾಂಗ್ರೆಸ್ ಪುನಶ್ಚೇತನಗೊಂಡಿದೆ’ ಎಂದಿದ್ದಾರೆ.
‘ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಾಂಗ್ರೆಸ್ ಎಲ್ಲವನ್ನೂ ನೀಡಿತ್ತು. ರಾಹುಲ್, ಪ್ರಿಯಾಂಕಾ, ಸೋನಿಯಾ ಗಾಂಧಿಗೆ ಆಪ್ತರಾಗಿಯೂ ಇದ್ದ ಅವರು ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿದ್ದರು. ಹೀಗಿದ್ದಾಗ ಅವರಿಂದ ನಾನು ಅಂತಹದ್ದನ್ನು ನಿರೀಕ್ಷಿಸಿರಲಿಲ್ಲ’ ಎಂದು ದಿಗ್ವಿಜಯ್ ಹೇಳಿದ್ದಾರೆ.
Advertisement