ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಗೆ ಒಕ್ಕರಿಸಿದ ಕೊರೋನಾ ಸೋಂಕು!

ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್

ಚಂಡೀಘಡ್: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾನ್ಸೂನ್ ಅಧಿವೇಶನಕ್ಕೆ ಕೇವಲ 2 ದಿನ ಇರುವಂತೆಯೇ ಹರ್ಯಾಣ ಸಿಎಂ ಖಟ್ಟರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು PGIMER ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಖಟ್ಟರ್ ಅವರು, ನನ್ನ ಕೊರೋನಾ ವರದಿ ಪಾಸಿಟಿವ್ ಬಂದಿದ್ದು, ಕಳೆದ 6 ದಿನಗಳ  ಅಂತರದಲ್ಲಿ ನನ್ನನ್ನು ಸಂಪರ್ಕಿಸಿದ್ದವರು ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ.

6 ದಿನಗಳ ಹಿಂದಷ್ಟೇ ಖಟ್ಟರ್ ಅವರು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಸಭೆಗೆ ಹಾಜರಾಗಿದ್ದರು. ಈ ಸಭೆ ಬೆನ್ನಲ್ಲೇ ಶೇಖಾವತ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇನ್ನು ಹರ್ಯಾಣದಲ್ಲಿ ಸಿಎಂ ಖಟ್ಟರ್ ಮಾತ್ರವಲ್ಲದೇ ಸ್ಪೀಕರ್ ಗುಪ್ತಾ, ಬಿಜೆಪಿ ಶಾಸಕ ಅಸೀಮ್  ಗೋಯೆಲ್ ಮತ್ತು ರಾಮ್ ಕುಮಾರ್ ಅವರೂ ಕೂಡ ಸೋಂಕಿಗೆ ತುತ್ತಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com