ಆಸ್ತಿ ವಿವಾದ: ಉತ್ತರ ಪ್ರದೇಶದಲ್ಲಿ ಗುಂಡಿಟ್ಟು ಪತ್ರಕರ್ತನ ಕಗ್ಗೊಲೆ

ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ರತನ್ ಸಿಂಗ್
ರತನ್ ಸಿಂಗ್

ಬಲ್ಲಿಯಾ: ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆಸ್ತಿ ವಿವಾದ ಹಿನ್ನೆಲೆಯಲ್ಲಿ  ಪತ್ರಕರ್ತ ರತನ್‌ ಸಿಂಗ್‌ (45) ಎಂಬುವರನ್ನು ಕೊಲೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ. 

ರತನ್‌ ಸಿಂಗ್ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತ ರತನ್‌ ಸಿಂಗ್‌ ಮತ್ತು ನೆರೆಯವರೊಂದಿಗೆ ಆಸ್ತಿ ವಿವಾದವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

'ರತನ್ ತನ್ನ ನೆರೆಯವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಸೋಮವಾರ ಸಂಜೆ ಎರಡೂ ಕಡೆಯವರ ನಡುವೆ ಜಗಳ ನಡೆದಿದೆ. ಕೊನೆಗೆ ನೆರೆಯವರು ರತನ್‌ ಅವರ ಮೇಲೆ ಗುಂಡು ಹಾರಿಸಿದ್ದಾರೆ. 

ಆರೋಪಿ ದಿನೇಶ್ ಸಿಂಗ್ ರತನ್ ಸಿಂಗ್ ಅವರ ಆಸ್ತಿಯಲ್ಲಿ ಪಾಲುದಾರನಾಗಿದ್ದ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿ ಎರಡೂ ಕಡೆಯವರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನೂ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com