2018ರ ಆತ್ಮಹತ್ಯೆ ಪ್ರಕರಣ: ಅರ್ನಾಬ್ ಗೋಸ್ವಾಮಿ ವಿರುದ್ಧ ಚಾರ್ಜ್ ಶೀಟ್ ದಾಖಲು

2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ. 
ಅರ್ನಾಬ್ ಗೋಸ್ವಾಮಿ
ಅರ್ನಾಬ್ ಗೋಸ್ವಾಮಿ

ಮುಂಬೈ: 2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ. 

ವಿನ್ಯಾಸಕ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್  ಆತ್ಮಹತ್ಯೆಗೆ ಶರಣಾದ ಆರೋಪದಡಿಯಲ್ಲಿ ನೆರೆಯ ರಾಯಗಡ ಜಿಲ್ಲೆಯ ಅಲಿಬಾಗ್ ನ ನ್ಯಾಯಾಲಯವೊಂದರಲ್ಲಿ ಚಾರ್ಚ್ ಶೀಟ್ ದಾಖಲಾಗಿದೆ.

ಗೋಸ್ವಾಮಿ ಅಲ್ಲದೇ, ಇತರ ಆರೋಪಿಗಳಾದ ಫಿರೋಜ್ ಷೇಕ್ ಮತ್ತು ನಿತೀಶ್ ಸರ್ದಾಅವರ ಹೆಸರು ಚಾರ್ಚ್ ಶೀಟ್ ನಲ್ಲಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ಹೇಳಿದ್ದಾರೆ. 65 ಜನರು ಸಾಕ್ಷಿದಾರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com