ನವದೆಹಲಿ: ದೆಹಲಿಯ ಬುರಾರಿಯಲ್ಲಿ ನಡೆದ ಶೂಟೌಟ್ ನಲ್ಲಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಪೋಲೀಸರು ತನಿಖೆ ನಡೆಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯ ದೆಹಲಿ ಉತ್ತರ ಜಿಲ್ಲೆಯಲ್ಲಿರುವ ಬುರಾರಿಯಲ್ಲಿ ಬುಧವಾರ ರಾತ್ರಿ ಶೂಟೌಟ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎ.ಎನ್.ಐ. ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಾಹಿತಿಯ ಪ್ರಕಾರ, ಘಟನೆ ಬಗ್ಗೆ ತಿಳಿದೊಡನೆ ಪೊಲೀಸರು ಸ್ಥಳಕ್ಕೆ ತಲುಪಿ ಎರಡು ಶವಗಳನ್ನು ವಶಕ್ಕೆ ಪಡೆದಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದೇ ಸ್ಥಳದ ಸಮೀಪ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆನ್ನುವುದು ಗಮನಾರ್ಹ ಸಂಗತಿ.
Advertisement