ಗುಜರಾತ್ ಸಚಿವರ ಮೇಲೆ ಶೂ ಎಸೆದಿದ್ದ ಗೋಪಾಲ್ ಇಟಾಲಿಯಾ ಈಗ ಎಎಪಿ ರಾಜ್ಯ ಉಪಾಧ್ಯಕ್ಷ

ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್‌ನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಹೇಳಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ಅಹಮದಾಬಾದ್: ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್‌ನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಹೇಳಿದೆ.

ಇದೇ ವೇಳೆ, ಈ 2017ರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರ ಮೇಲೆ ಶೂ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದ ಗೋಪಾಲ್ ಇಟಾಲಿಯಾ ಅವರನ್ನು ಎಎಪಿ ರಾಜ್ಯ ಉಪಾಧ್ಯಕ್ಷ(ರಾಜ್ಯ ಸಂಚಾಲಕ)ರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿದೆ.

ಎಎಪಿ ಗುಜರಾತ್‌ನಲ್ಲಿ ಪರ್ಯಾಯ ಪಕ್ಷವಾಗಿ ಹೊರಹೊಮ್ಮುತ್ತಿದ್ದು, ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಎಎಪಿ ಗುಜರಾತ್ ರಾಜ್ಯ ಸಂಚಾಲಕರಾಗಿ ಯುವ ಮುಖಂಡ ಗೋಪಾಲ್ ಇಟಾಲಿಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎಪಿ ಗುಜರಾತ್ ಟ್ವೀಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com