ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ರಾತ್ರಿ 8 ಗಂಟೆ ಸುಮಾರಿಗೆ ರಾಯಟೆ- ಅಂಬರ್ನಾಥ್ ರಸ್ತೆಯ ವಹೂಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮುರ್ಬಾದ್ ಬಿಜೆಪಿ ಶಾಸಕ ಕಿಸಾನ್ ಕ್ಯಾಥೋರೆ ಪ್ರಯಾಣಿಸುತ್ತಿದ್ದ ಕಾರು, ಪುರುಷ ಹಾಗೂ ಮಹಿಳೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಶಾಸಕ ಮತ್ತು ಅವರ ಅಂಗರಕ್ಷಕರೂ ಗಾಯಗೊಂಡಿದ್ದಾರೆ ಎಂದು ಕಲ್ಯಾಣ್ ತಾಲ್ಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪುರುಷ ಹಾಗೂ ಮಹಿಳೆಯ ಹೆಸರು ಹಾಗೂ ಇತರೆ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement