ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರ ಹೊಡೆದುರುಳಿಸಿದ ಸೇನೆ!

ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ.
ಸೇನೆ ವಶಕ್ಕೆ ಪಡೆದ ಪಿಸ್ತೂಲ್
ಸೇನೆ ವಶಕ್ಕೆ ಪಡೆದ ಪಿಸ್ತೂಲ್

ಅಮೃತಸರ್: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ.

ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ  ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಶೋಧ ನಡೆಸಿದ ಯೋಧರು ಘಟನಾ ಸ್ಥಳದಲ್ಲಿ ಒಂದು ಎಕೆ 56 ರೈಫಲ್, 61 ಸುತ್ತಿನ ಸಡೀವ ಗುಂಡುಗಳ 2 ಮ್ಯಾಗಜಿನ್, ಒಂದು ಮ್ಯಾಗ್ನಮ್ ರೈಫಲ್ ಮತ್ತು 29 ಸುತ್ತಿನ ಗುಂಡುಗಳು, ಒಂದು ಪಿಸ್ತೂಲ್ ಮತ್ತು ಎರಡು ಮ್ಯಾಗಜಿನ್ ಗಳು, 2 ಪಿವಿಸಿ ಪೈಪ್ ಗಳು, ಪಾಕಿಸ್ತಾನದ 30  ರೂಗಳ ನೋಟುಗಳನ್ನು ಸೇನೆ ವಶಕ್ಕೆ ಪಡೆದಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com