ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ ನೀಡಿದ್ದು, ಅವರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ ಅಧಿಕೃತವಾಗಿ ಬಿಜೆಪಿ ಸೇರಿದರು.
ಇದಕ್ಕೂ ಮುನ್ನ ಟಿಎಂಸಿಯ ಸದಸ್ಯರಿಗೆ ಪತ್ರ ಬರೆದಿರುವ ಸುವೇಂದು ಅಧಿಕಾರಿ, ತೃಣಮೂಲ ಕಾಂಗ್ರೆಸ್ನಲ್ಲಿ ಆಳವಾದ ಕೊಳೆತ ಮತ್ತು ಅಸ್ವಸ್ಥತೆ ಉಂಟಾಗಿದೆ, ಒಂದೇ ದಿನದಲ್ಲಿ ಯಾವುದೇ ವ್ಯಕ್ತಿಯಿಂದ ಟಿಎಂಸಿ ಸ್ಥಾಪನೆಯಾಗಿಲ್ಲ.ಇದು ಬೃಹತ್ ಪ್ರಮಾಣದಲ್ಲಿ ನಿರಂತರ ಪ್ರಯತ್ನವಾಗಿತ್ತು ಎಂದು ಬರೆದಿದ್ದಾರೆ.
Advertisement