ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್ಪುರ ಪ್ರದೇಶದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ 18 ವರ್ಷದ ಪ್ರತಿಮೆಗೆ ಹಾನಿಯಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಸಿಕಿಯಾ ಗ್ರಾಮದ ಉದ್ಯಾನವನದಲ್ಲಿ ಸ್ಥಾಪಿಸಲಾದ ಪ್ರತಿಮೆಯ ಕೈ ಇಂದು ಬೆಳಗ್ಗೆ ಮುರಿದು ಬಿದ್ದಿರುವುದು ಕಂಡುಬಂದಿದೆ ಎಂದು ಸಿಕಂದರ್ಪುರ ಪೊಲೀಸ್ ಅಧಿಕಾರಿ ಬಾಲೆಂಡು ಭೂಷಣ್ ಮಿಶ್ರಾ ಹೇಳಿದ್ದಾರೆ.
ಈ ಪ್ರತಿಮೆಯನ್ನು 18 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಅದನ್ನು ದುರಸ್ತಿ ಮಾಡಲಾಗುವುದು ಎಂದರು.
ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
Advertisement