ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದ್ದು ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.
ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ಶ್ರೀನಗರದ ಪರಿಮ್ ಪೊರಾ ಚೆಕ್ ಪೋಸ್ಟ್ ಬಳಿ ಈ ದಾಳಿ ನಡೆದಿದ್ದು ಭದ್ರತಾ ಪಡೆ ಯೋಧರು ಗಾಯಗೊಂಡ ಓರ್ವ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ತಿಂಗಳು ಗಣರಾಜ್ಯೋತ್ಸವಕ್ಕೆ ಮೊದಲು ಜಮ್ಮು-ಕಾಶ್ಮೀರ ಪೊಲೀಸರು ಜೈಶ್ ಇ ಮೊಹಮ್ಮದ್ ಸಂಘಟನೆಯ ಘಟಕವನ್ನು ಬೇಧಿಸಿ ಇಬ್ಬರು ಉಗ್ರರನ್ನು ಬಂಧಿಸಿದ್ದರು. ಈ ಉಗ್ರರು ಗಣರಾಜ್ಯೋತ್ಸವ ದಿನ ದೇಶಾದ್ಯಂತ ದೊಡ್ಡ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.
ಈ ತಿಂಗಳ ಆರಂಭದಲ್ಲಿ ಜಮ್ಮು-ಕಾಶ್ಮೀರದ ಲಾಲ್ ಚೌಕ್ ಬಳಿ ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಜವಾನರು ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದರು.
Advertisement