ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ 

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ: ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

 ಭಾನುವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಧ್ವಜವನ್ನು ಬದಲಾಯಿಸಲ್ಲ, ನಮ್ಮ ಹಿಂದೂತ್ವ ಏನು ಎಂಬುದನ್ನು ಇಡೀ ಜಗತ್ತಿಗೆ ಗೊತ್ತಿದೆ ಎಂದರು.

ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ನುಸುಳುಕೋರರ ವಿರುದ್ಧ ಎಂಎನ್ ಎಸ್ ಪಕ್ಷದ ರಾಜ್ ಠಾಕ್ರೆ ನೇತೃತ್ವದಲ್ಲಿ ನಡೆದ ಮೆಗಾ ರ‍್ಯಾಲಿ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಈ ರೀತಿಯ ಪ್ರತಿಕ್ರಿಯೆ ನೀಡಿದರು.

ದಕ್ಷಿಣ ಮುಂಬೈಯ ಸಹ್ಯಾದ್ರಿಯ ಶಿವಸೇನಾ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಶಿವಸೇನಾ ನಾಯಕರು ಪಾಲ್ಗೊಂಡಿದ್ದರು.

ಮಹಾರಾಷ್ಟ್ರದ ರೈತರು ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲು ಸಭೆಯನ್ನು ಆಯೋಜಿಸಿದ್ದಾಗಿ ಶಾಸಕ ದಿಲೀಪ್ ಲಾಂಡೆ ತಿಳಿಸಿದರು.ನಂತರ ಎಲ್ಲಾ ಪಕ್ಷದ ಶಾಸಕರು ಸಿಎಎ, ಎನ್ ಆರ್ ಸಿ ಬಗ್ಗೆ ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com