ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ

ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ 5 ದಿನಗಳ ಭಾರತ ಪ್ರವಾಸದಲ್ಲಿದ್ದು ಕಾಶಿ ವಿಶ್ವನಾಥ ದೇವಾಲಯ, ಸಾರನಾಥದಲ್ಲಿರುವ ಬೌದ್ಧ ಯಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. 
ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ
ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ

ಲಖ್ನೋ: ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ 5 ದಿನಗಳ ಭಾರತ ಪ್ರವಾಸದಲ್ಲಿದ್ದು ಕಾಶಿ ವಿಶ್ವನಾಥ ದೇವಾಲಯ, ಸಾರನಾಥದಲ್ಲಿರುವ ಬೌದ್ಧ ಯಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. 

ರಾಜಪಕ್ಸ ಭೇಟಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ರಾಜಪಕ್ಸ ಸಾರನಾಥ ದೇವಾಲಯಕ್ಕೆ ತೆರಳಲಿದ್ದು, ಉತ್ತರ ಪ್ರದೇಶದಲ್ಲೇ ರಾತ್ರಿ ತಂಗಲಿದ್ದಾರೆ. ಫೆ.10 ರಂದು ಬೆಳಿಗ್ಗೆ ಬೋಧ್ ಗಯಾ ಕೇಂದ್ರದಲ್ಲಿರುವ ಮಹಾಬೋಧಿ ದೇವಾಲಯಕ್ಕೆ ರಾಜಪಕ್ಸ ತೆರಳಲಿದ್ದು, ಆ ನಂತರ ತಿರುಪತಿ ವೆಂಕಟೇಶ್ವರ ದೇವಾಲಯದ ದರ್ಶನ ಮಾಡಲಿದ್ದಾರೆ. 

ಮಹಿಂದಾ ರಾಜಪಕ್ಸ ತಿರುಪತಿ ದೇವಾಲಯದ ಕಟ್ಟಾ ಭಕ್ತರಾಗಿದ್ದು, ತಿರುಪತಿ ದೇವಾಲಯದ ದರ್ಶನದ ಬಳಿಕ ಶ್ರೀಲಂಕಾಗೆ ವಾಪಸ್ಸಾಗಲಿದ್ದಾರೆ. 5 ದಿನಗಳ ಭಾರತ ಪ್ರವಾಸದಲ್ಲಿ ರಾಜಪಕ್ಸ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ವಿಷಯಗಳಾದಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com