ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಚಂಡ ಗೆಲುವು ದಾಖಲಿಸಲಿದೆ ಎಂದು ಎಎಪಿ ಮುಖಂಡ ಸಂಜಯ್ ಸಿಂಗ್ ಹೇಳಿದ್ದಾರೆ.
ಬಿಗಿ ಭದ್ರತೆ ನಡುವೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕೇಜ್ರಿವಾಲ್ ಪಕ್ಷ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ, ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆಯಲ್ಲಿದ್ದಾರೆ.
ಮಾಡಿರುವ ಕೆಲಸಗಳ ಆಧಾರದ ಮೇಲೆ ಚುನಾವಣೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಚುನಾವಣೆ ಆರಂಭದಿಂದಲೂ ಹೇಳುತ್ತಿದ್ದೇವು. ಆದು ಬೇಗನೆ ನೆರವೇರಿದೆ. ಸ್ವಲ್ವ ಹೊತ್ತು ಕಾಯ್ದು ನೋಡಿರಿ ಎಎಪಿ ಪ್ರಚಂಡ ಗೆಲುವು ದಾಖಲಿಸಲಿದೆ ಎಂದು ಸಂಜಯ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
Advertisement