ಬಜೆಟ್ ಮೇಲಿನ ಚರ್ಚೆಗೆ ಇಂದು ಹಣಕಾಸು ಸಚಿವೆ ಉತ್ತರ:ಸದನದಲ್ಲಿ ಹಾಜರಿರುವಂತೆ ಸದಸ್ಯರಿಗೆ ಬಿಜೆಪಿ ವಿಪ್ ಜಾರಿ 

ಕಳೆದ ಫೆಬ್ರವರಿ 1ರಂದು ಮಂಡಿಸಿದ್ದ ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಪಕ್ಷ ವಿಪ್ ಜಾರಿ ಮಾಡಿದೆ.
ಬಜೆಟ್ ಮೇಲಿನ ಚರ್ಚೆಗೆ ಇಂದು ಹಣಕಾಸು ಸಚಿವೆ ಉತ್ತರ:ಸದನದಲ್ಲಿ ಹಾಜರಿರುವಂತೆ ಸದಸ್ಯರಿಗೆ ಬಿಜೆಪಿ ವಿಪ್ ಜಾರಿ 

ನವದೆಹಲಿ: ಕಳೆದ ಫೆಬ್ರವರಿ 1ರಂದು ಮಂಡಿಸಿದ್ದ ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಪಕ್ಷ ವಿಪ್ ಜಾರಿ ಮಾಡಿದೆ.


ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವ ನಿರೀಕ್ಷೆಯಿದೆ.


ಕೇಂದ್ರ ಬಜೆಟ್ ಮಂಡನೆ ಕುರಿತು ಕಳೆದ ಕೆಲ ದಿನಗಳಿಂದ ಸಂಸತ್ತಿನಲ್ಲಿ ಸದಸ್ಯರ ಮಧ್ಯೆ ಚರ್ಚೆಗಳು ನಡೆದಿದ್ದವು. ವಿರೋಧ ಪಕ್ಷಗಳು ಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಗಳ, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ ಮಿತ್ರ ಪಕ್ಷಗಳು ಕೇಂದ್ರ ಬಜೆಟ್ ನಲ್ಲಿ ಪ್ರಕಟಿಸಿರುವ ಹಲವು ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com