ಮತ ಎಣಿಕೆಯಲ್ಲಿ ನಿಖರತೆ ಕಾಯ್ದುಕೊಳ್ಳುವುದು ನಮ್ಮ ಆದ್ಯತೆ: ದೆಹಲಿ ಚುನಾವಣಾ ಆಯೋಗ 

ದೆಹಲಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ನಿಖರತೆ ಕಾಪಾಡುವುದರ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ ಎಂದು ದೆಹಲಿ ಚುನಾವಣಾಧಿಕಾರಿ ರಣಬೀರ್ ಸಿಂಗ್ ಹೇಳಿದ್ದಾರೆ.
ಮತ ಎಣಿಕೆಯಲ್ಲಿ ನಿಖರತೆ ಕಾಯ್ದುಕೊಳ್ಳುವುದು ನಮ್ಮ ಆದ್ಯತೆ: ದೆಹಲಿ ಚುನಾವಣಾ ಆಯೋಗ 

ನವದೆಹಲಿ: ದೆಹಲಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ನಿಖರತೆ ಕಾಪಾಡುವುದರ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ ಎಂದು ದೆಹಲಿ ಚುನಾವಣಾಧಿಕಾರಿ ರಣಬೀರ್ ಸಿಂಗ್ ಹೇಳಿದ್ದಾರೆ.


ಇಂದು ಬೆಳಗ್ಗೆ ದೆಹಲಿಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾದ ನಂತರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಭದ್ರತೆಗೆ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸಮಯಕ್ಕೆ ಸರಿಯಾಗಿ ಮತ ಎಣಿಕೆ ಆರಂಭವಾಗಿದ್ದು ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ಕೆಲಸಗಳು ನಡೆದಿವೆ ಎಂದರು.


ಮೊದಲಿಗೆ ಅಂಚೆ ಮತ ಎಣಿಕೆ ನಂತರ ವಿದ್ಯುನ್ಮಾನ ಮತ ಎಣಿಕೆ ನಡೆದಿದ್ದು ಎಲ್ಲಾ ಕೇಂದ್ರಗಳಲ್ಲಿ ನಿಖರವಾಗಿ ಮತ ಎಣಿಕೆ ಮಾಡುವುದು ನಮ್ಮ ಕೆಲಸವಾಗಿತ್ತು ಎಂದರು.


ಸದ್ಯ ಆಮ್ ಆದ್ಮಿ ಪಕ್ಷ 54 ಕ್ಷೇತ್ರಗಳಲ್ಲಿ, ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿವೆ. ಕಾಂಗ್ರೆಸ್ ಈ ಬಾರಿಯೂ ಖಾತೆ ತೆರೆಯುವ ನಿರೀಕ್ಷೆಯನ್ನು ಹೊಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com