ಕೇರಳ: ಕೊರೋನಾ ವೈರಸ್ ಪೀಡಿತ ಮೂವರು ರೋಗಿಗಳು ಗುಣಮುಖ

ಕೊರೋನಾ ವೈರಸ್ ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ರಾಜ್ಯದ ಮೂವರು ರೋಗಿಗಳು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುವನಂತಪುರ: ಕೊರೋನಾ ವೈರಸ್ ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ರಾಜ್ಯದ ಮೂವರು ರೋಗಿಗಳು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಮೂವರು ರೋಗಿಗಳಿಗೂ ಕೇರಳ ರಾಜ್ಯ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಮೂವರು ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. 

ವುಹಾನ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದ ಮೂವರು ಚೀನಾದಿಂದ ಮರಳಿ ಕೇರಳಕ್ಕೆ ಬಂದಿದ್ದರು. ಈ ವೇಳೆ ತಪಾಸಣೆ ನಡೆಸಿದ್ದಾಗ ಮೂವರಲ್ಲೂ ಕೊರೋನಾ ವೈರಸ್ ಪತ್ತೆಯಾಗಿತ್ತು. ಬಳಿಕ ವಿಶೇಷ ಕೊಠಡಿಯಲ್ಲಿ ಮೂವರಿಗೂ ಚಿಕಿತ್ಸೆ ಆರಂಭಿಸಲಾಗಿತ್ತು. 

ರೋಗಿಗಳು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಕೇರಳ ರಾಜ್ಯ ಸಚಿವ ಥಾಮಸ್ ಐಸಾಕ್, ನಿಫಾದಂತೆಯೇ ಕೇರಳ ರಾಜ್ಯ ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿಯೂ ಗೆಲುವು ಸಾಧಿಸಿದೆ. ಮೂವರು ರೋಗಿಗಳು ಇದೀಗ ಗುಣಮುಖರಾಗಿದ್ದಾರೆ. ಯಾರಿಗೂ ಸೋಂಕು ಹರಡಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com