ಗೋರಾಖ್ಪುರ: ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ಪತ್ರಕರ್ತರ ಸೋಗಿನಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಗೋರಖ್ಪುರದಲ್ಲಿರುವ ಗೋರಖ್ ನಾತ ದೇವಸ್ಥಾನದಲ್ಲಿಯೇ ಯೋಗಿ ಆದಿತ್ಯನಾಥ್ ಅವರ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದು, ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಯೋಗಿ ಅವರ ಪತ್ರಿಕಾಗೋಷ್ಠಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಭಾವಚಿತ್ರವನ್ನೊಳಗೊಂಡ ನೂತನ ಗುರುತಿನ ಚೀಟಿ ಹಂಚಿಕೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement