ನವದೆಹಲಿ: ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಚೀನಾ ದೇಶ ವುಹಾನ್ ನಲ್ಲಿನ ಭಾರತೀಯರನ್ನು ಅಲ್ಲಿನ ವಾಪಸ್ ಕರೆತರುವಲ್ಲಿ ಶ್ರಮಿಸಿದ ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಯತ್ನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ತಂಡಕ್ಕೆ ಪ್ರಧಾನಿ ಮೋದಿ ಮೆಚ್ಚುಗೆಯ ಪತ್ರ ಬರೆದಿದ್ದು ಈ ಪತ್ರವನ್ನು ನಾಗರಿಕ ವಿಮಾನಯಾನ ಸಚಿವರು ಸಿಬ್ಬಂದಿಗೆ ನೀಡಲಿದ್ದಾರೆ.
ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಹರಡಿರುವ ವುಹಾನ್ ನಲ್ಲಿನ ಭಾರತೀಯರನ್ನು ರಕ್ಷಿಸಲು ಏರ್ ಇಂಡಿಯಾ ತುರ್ತು ಕಾರ್ಯಾಚರಣೆ ನಡೆಸಿತ್ತು. ಈ ಪ್ರದೇಶದಲ್ಲಿನ ಗಂಭೀರ ಸ್ಥಿತಿಯ ಬಗ್ಗೆ ಅರಿವಿದ್ದರೂ ಅಲ್ಲಿನ ಭಾರತೀಯರ ರಕ್ಷಣೆಗಾಗಿ ಸತತ ಎರಡು ದಿನ ಅಂದರೆ 2020ರ ಜನವರಿ 31 ಮತ್ತು ಫೆಬ್ರವರಿ 1ರಂದು ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ತಂಡವನ್ನು ಎರಡು ಬಿ–747 ವಿಮಾನದಲ್ಲಿ ಕಳುಹಿಸಿಕೊಟ್ಟಿತ್ತು.
Advertisement