'ದೀದಿ' ಸರ್ಕಾರದಿಂದ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್ ಭದ್ರತೆ? 

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್  ಭದ್ರತೆ ನೀಡಲು ಚಿಂತಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಟಿಎಂಸಿ ಸರ್ಕಾರ ಮತ್ತು ರಾಜ್ಯ ಸ್ಕಾರದ ಕಾರ್ಯಾಲಯಗಳು ಮಾತ್ರ ಈ ಬಗ್ಗೆ ಯಾ ವುದೇ ಮಾಹಿತಿ ನೀಡುತ್ತಿಲ್ಲ.
ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್

ಕೊಲ್ಕೋತಾ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್  ಭದ್ರತೆ ನೀಡಲು ಚಿಂತಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಟಿಎಂಸಿ ಸರ್ಕಾರ ಮತ್ತು ರಾಜ್ಯ ಸ್ಕಾರದ ಕಾರ್ಯಾಲಯಗಳು ಮಾತ್ರ ಈ ಬಗ್ಗೆ ಯಾ ವುದೇ ಮಾಹಿತಿ ನೀಡುತ್ತಿಲ್ಲ.

ಈ ಬಗ್ಗೆ ಮಾಹಿತಿ ಪಡೆಯಲು ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. 2021ರ ಬಂಗಾಳ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಶಾಂತ್ ಕಿಶೋರ್ ಟಿಎಂಸಿ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪಶ್ಚಿಮ ಬಂಗಾಳ ಜನತೆ ಜೊತೆ ಯಾವುದೇ ಸಂಪರ್ಕವಿಲ್ಲದ ಪ್ರಶಾಂತ್ ಗೆ ಝೆಡ್ ಪ್ಲಸ್ ಭದ್ರತೆ ನೀಡುವ ಅವಶ್ಯಕತೆ ಏನು, ಸರ್ಕಾರಕ್ಕೆ ಇದೊಂದು ಆರ್ಥಿಕ ಹೊರೆಯಾಗುತ್ತದೆ  ಎಂದು ಸಿಪಿಐ(ಎಂ) ಮುಖಂಡ ಸುಜನ್ ಚಕ್ರವರ್ತಿ ಲೇವಡಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com