ತೆಲಂಗಾಣ: ಮನೆಗೆ ಹೋಗಲು ಯಾವುದೇ ವಾಹನ ಸಿಗದಿದ್ದಾಗ ಸರ್ಕಾರಿ ಬಸ್ಸನ್ನೇ ಕದ್ದ ಭೂಪ

ವ್ಯಕ್ತಿಯೊಬ್ಬ ತನ್ನ ಮನೆಗೆ ಹೋಗಲು ಯಾವುದೇ ವಾಹನ ಸಿಗದಿದ್ದಾಗ ಬಸ್‌ ನಿಲ್ದಾಣದ ಬಳಿ ನಿಂತಿದ್ದ ಬಸ್ಸನ್ನೇ ಕದ್ದು ಮನೆಗೆ ಹೋಗಿರುವ ಘಟನೆ ತೆಲಂಗಾಣದ ವಿಕಾರಾಬಾದ್​ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಕಾರಾಬಾದ್: ವ್ಯಕ್ತಿಯೊಬ್ಬ ತನ್ನ ಮನೆಗೆ ಹೋಗಲು ಯಾವುದೇ ವಾಹನ ಸಿಗದಿದ್ದಾಗ ಬಸ್‌ ನಿಲ್ದಾಣದ ಬಳಿ ನಿಂತಿದ್ದ ಬಸ್ಸನ್ನೇ ಕದ್ದು ಮನೆಗೆ ಹೋಗಿರುವ ಘಟನೆ ತೆಲಂಗಾಣದ ವಿಕಾರಾಬಾದ್​ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.

ಫೆಬ್ರವರಿ 16ರ ರಾತ್ರಿ 9 ಗಂಟೆಯ ಸುಮಾರಿಗೆ ತಂದೂರ್ ಬಸ್ ನಿಲ್ದಾಣದಲ್ಲಿ ವ್ಯಕ್ಕಿಯೊಬ್ಬ ಬಸ್ಸಿಗೆ ಕಾದು ಸುಸ್ತಾಗಿ ಕೊನೆಗೆ ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್ಸನ್ನೇ ಕದ್ದು ಮನೆಗೆ ಹೋಗಿದ್ದಾನೆ. ತನ್ನ ಊರು ತಲುಪಿದ ನಂತರ ವ್ಯಕ್ತಿ ಬಸ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಕದ್ದುಹೋದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಮತ್ತು ಮುಂದಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com