ದೆಹಲಿ ಹಿಂಸಾಚಾರ: ಮೃತರ ಸಂಖ್ಯೆ 32ಕ್ಕೆ ಏರಿಕೆ 

ರಾಷ್ಟ್ರ ರಾಜಧಾನಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದ್ದು, ಸುಮಾರು 200 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಮುಖ್ಯಪೇದೆ ರತನ್ ಲಾಲ್ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡುತ್ತಿರುವ ಪುತ್ರನ ಚಿತ್ರ
ಮುಖ್ಯಪೇದೆ ರತನ್ ಲಾಲ್ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡುತ್ತಿರುವ ಪುತ್ರನ ಚಿತ್ರ

ನವದೆಹಲಿ:ರಾಷ್ಟ್ರ ರಾಜಧಾನಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದ್ದು, ಸುಮಾರು 200 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

 30 ಮಂದಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಗುರು ತೆಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸುನೀಲ್ ಕುಮಾರ್ ಗೌತಮ್ ತಿಳಿಸಿದ್ದಾರೆ.

ಜಿಟಿಬಿ ಆಸ್ಪತ್ರೆಯಲ್ಲಿ 30 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಇನ್ನಿಬ್ಬರು ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 106 ಮಂದಿಯನ್ನು ಬಂಧಿಸಲಾಗಿದ್ದು, 18 ಎಫ್ ಐಆರ್ ನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com