ಗಲಭೆ ಜೀವನದ ಭಾಗ: ದೆಹಲಿ ಹಿಂಸಾಚಾರಕ್ಕೆ ಹರಿಯಾಣ ಸಚಿವರ ಪ್ರತಿಕ್ರಿಯೆ

34 ಮಂದಿಯನ್ನು ಬಲಿ ಪಡೆದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹರಿಯಾಣ ಸಚಿವ ರಂಜಿತ್ ಚೌಟಾಲ ಅವರು. ಗಲಭೆ ಜೀವನ ಒಂದು ಭಾಗ ಎಂದು ಗುರುವಾರ ಹೇಳಿದ್ದಾರೆ.
ದೆಹಲಿ ಹಿಂಸಾಚಾರ
ದೆಹಲಿ ಹಿಂಸಾಚಾರ
Updated on

ನವದೆಹಲಿ: 34 ಮಂದಿಯನ್ನು ಬಲಿ ಪಡೆದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹರಿಯಾಣ ಸಚಿವ ರಂಜಿತ್ ಚೌಟಾಲ ಅವರು. ಗಲಭೆ ಜೀವನ ಒಂದು ಭಾಗ ಎಂದು ಗುರುವಾರ ಹೇಳಿದ್ದಾರೆ.

ಗಲಭೆಗಳು ಆಗಾಗ ನಡೆಯುತ್ತವೆ. ಈ ಹಿಂದೆಯೂ ನಡೆದಿವೆ. ಇಂದಿರಾ ಗಾಂಧಿ ಹತ್ಯೆಯಾದಾಗ ಇಡೀ ದೆಹಲಿಯೇ ಹೊತ್ತಿ ಉರಿದಿತ್ತು. ಗಲಭೆ ಜೀವನದ ಭಾಗ ಎಂದು ಚೌಟಾಲ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ ಇಂದು 34ಕ್ಕೆ ಏರಿಕೆಯಾಗಿದೆ.

ಕಳೆದ ಭಾನುವಾರದಿಂದ ಆರಂಭವಾದ ಹಿಂಸಾಚಾರದಲ್ಲಿ 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದವರ ಪೈಕಿ ಇಬ್ಬರು ಗುರುವಾರ ಮೃತರಾಗಿದ್ದು, ದೆಹಲಿಯ ಲೋಕನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ಓರ್ವ ಗಾಯಾಳು ಮತೃಪಟ್ಟಿದ್ದಾರೆ. ಆ ಮೂಲಕ ದೆಹಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ ಇದೀಗ 34ಕ್ಕೇರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com