ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ

ಪೌರತ್ವ ತಿದ್ದುಪಡಿ ಕಾಯ್ದೆಗೆ ಅಂಗೀಕಾರಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರೊಳಿಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ. 
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆಗೆ ಅಂಗೀಕಾರಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರೊಳಿಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ. 

ಈ ನಿಟ್ಟಿನಲ್ಲಿ ಉತ್ತರ ಪ್ರದೇಶದ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಗೆ ಸೂಚನೆ ನೀಡಿದ್ದು ಬಾಂಗ್ಲಾ, ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ದೌರ್ಜನ್ಯಕ್ಕೊಳಗಾಗಿದ್ದ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಪಟ್ಟಿಯನ್ನು ತಯಾರಿಸುವಂತೆ ತಿಳಿಸಲಾಗಿದೆ. 

ಈ ಬಗ್ಗೆ ಉತ್ತರ ಪ್ರದೇಶದ ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ  ಅವಿನಾಶ್ ಅವಸ್ಥಿ ಮಾತನಾಡಿದ್ದು, ಅಫ್ಘಾನಿಸ್ಥಾನದಿಂದ ಉತ್ತರ ಪ್ರದೇಶಕ್ಕೆ ಬಂದು ದಶಕಗಳಿಂದ ಪೌರತ್ವವಿಲ್ಲದೇ ಜೀವಿಸುತ್ತಿರುವವರ ಸಂಖ್ಯೆ ಕಡಿಮೆ ಇದೆ, ಪಟ್ಟಿ ತಯಾರಿಸುವಿಕೆ ಸಿಎಎ ಜಾರಿಗೊಳಿಸುವುದಕ್ಕೆ ಮೊದಲ ಹೆಜ್ಜೆ.

ಸರ್ಕಾರ ನೈಜ ವಲಸಿಗರನ್ನು ಪತ್ತೆ ಮಾಡಿ ದೇಶದ ಪೌರತ್ವ ಪಡೆಯುವುದಕ್ಕೆ ಅರ್ಹರಾಗಿರುವವರನ್ನು ಪತ್ತೆ ಮಾಡಲಿದೆ.  ಸಿಎಎ ನಿಯಮಾವಳಿ ಪ್ರಕಾರ ಪೌರತ್ವ  ನೀಡಲಾಗುತ್ತದೆ. ರಾಜ್ಯದಲ್ಲಿರುವ ಮುಸ್ಲಿಂ ವಲಸಿಗರ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಲಿದೆ ಎಂದು ಅವಿನಾಶ್ ಅವಸ್ಥಿ ಮಾಹಿತಿ ನೀಡಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com