ಇಂದೋರ್: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶದಾದ್ಯಂತ ಜಾರಿಗೆ ತರುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ಆರ್'ಸಿ ಬಗ್ಗೆ ನಮಗೆ ಸ್ಪಷ್ಟನೆ ಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ, ಜೆಡಿ ನಡ್ಡಾ ಅವರ ಹೇಳಿಕೆಗಳು ವಿಭಿನ್ನವಾಗಿದ್ದು, ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರಲಾಗುತ್ತಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ನಮಗೆ ಸ್ಪಷ್ಟನೆ ಬೇಕಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಾವರ್ಕರ್ ಕುರಿತ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆಕ್ರೋಶ ವ್ಯಕ್ತಪಡಿಸುತ್ತಿರುವವರು ಪುಸ್ತಕ ಬರೆದಿರುವ ವ್ಯಕ್ತಿಯನ್ನು ಪ್ರಶ್ನಿಸಬೇಕು. ಕಾಂಗ್ರೆಸ್ ಸೇವಾ ದಳವನ್ನಲ್ಲ. ಒಬ್ಬ ವ್ಯಕ್ತಿಯ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೆ ನೀಡುವುದೇ ತಪ್ಪು. ಆದರೆ, ಕಾಂಗ್ರೆಸ್ ಸೇವಾ ದಳ ಯಾರ ಬಗ್ಗೆಯೂ ಏನನ್ನೂ ಬರೆದಿಲ್ಲ ಎಂದು ತಿಳಿಸಿದ್ದಾರೆ.
Advertisement