ಸಿಎಎ ವಿರೋಧಿಸಿ ದೇಶವ್ಯಾಪಿ ಯಾತ್ರೆ : ಯಶವಂತ ಸಿನ್ಹಾ

ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ 'ಯಾತ್ರೆ' ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಶನಿವಾರ ಘೋಷಿಸಿದ್ದಾರೆ.
ಯಶವಂತ್ ಸಿನ್ಹಾ
ಯಶವಂತ್ ಸಿನ್ಹಾ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ 'ಯಾತ್ರೆ' ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಶನಿವಾರ ಘೋಷಿಸಿದ್ದಾರೆ.

ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು 'ಗಾಂಧಿ ಶಾಂತಿ ಯಾತ್ರೆ' ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜನವರಿ 9ರಂದು ಮುಂಬೈನ ಅಪೋಲೋ ಬಂದರ್ ನಿಂದ ಯಾತ್ರೆ ಆರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಮೂಲಕ ದೆಹಲಿಯಲ್ಲಿ ಅಂತ್ಯಗೊಳ್ಳಲಿದೆ ಎಂದು ಸಿನ್ಹಾ ತಿಳಿಸಿದ್ದಾರೆ.

ಸುಮಾರು 3000 ಕಿ. ಮೀ. ಸಾಗಲಿರುವ ಈ ಯಾತ್ರೆ ಜನವರಿ 30ರಂದು ದೆಹಲಿಯ ರಾಜ್ ಘಾಟ್ ಬಳಿ ಸಮಾಪ್ತಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಶತ್ರುಘ್ನ ಸಿನ್ಹಾ ಹಾಗೂ ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹ್ತಾ ಅವರು ಸಹ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com