ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಸ್ವರಾಜ್ ಅಭಿಯಾನ ಮುಖ್ಯಸ್ಥ ಯೋಗೇಂದ್ರ ಯಾದವ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ
ಗೂಂಡಾಗಿರಿಯನ್ನು ತಡೆಯಲು ಯಾರೂ ಕೂಡಾ ಮುಂದಾಗಲಿಲ್ಲ. ಮಾಧ್ಯಮಗಳ ಜೊತೆಗೆ ಮಾತನಾಡಲು ಬಿಡಲಿಲ್ಲ ಎಂದು ಯಾದವ್ ಹೇಳಿದ್ದಾರೆ.ಪೊಲೀಸರು ಅಲ್ಲಿಯೇ ನಿಂತಿದ್ದರೂ ಏನು ಮಾಡಲಿಲ್ಲ, ಪೊಲೀಸರು ಭಯಪಟ್ಟರೇ ಅವರ ಸಮವಸ್ತ್ರವನ್ನು ತೆಗೆದು ಮನೆಗೆ ಹೋಗಲಿ ಎಂದರು
ವಿಶ್ವವಿದ್ಯಾಲಯದ ಶಿಕ್ಷಕರ ಅಸೋಯೇಷನ್ ನಿಂದ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿದೆ.
ಎಬಿವಿಪಿ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಿಂದ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಐಶೆ ಘೋಷ್ ಮತ್ತಿತರರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಆದರೆ, ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ದಾಳಿಯಿಂದ 25 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಎಬಿವಿಪಿ ಆಪಾದಿಸಿದೆ.
Advertisement