ನವದೆಹಲಿ: ಹತ್ತು ಕಾರ್ಮಿಕ ಮತ್ತು ವ್ಯಾಪಾರ ಸಂಘಟನೆಗಳು ಬುಧವಾರ ಕರೆ ನೀಡಿರುವ ಭಾರತ ಬಂದ್ ನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೋದಿ-ಶಾ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ. ಮೋದಿಯವರ ಬಂಡವಾಳಶಾಹಿ ಧೋರಣೆಯಿಂದ ಸಾರ್ವಜನಿಕ ವಲಯಗಳು ಇಂದು ದುರ್ಬಲಗೊಂಡಿವೆ. ಇಂದು 20ಕೋಟಿಗೂ ಅಧಿಕ ಕಾರ್ಮಿಕರು ಭಾರತ ಬಂದ್ ನಡೆಸುತ್ತಿದ್ದು ಅವರಿಗೆ ನನ್ನ ವಂದನೆಗಳು ಎಂದಿದ್ದಾರೆ.
Advertisement