ಉತ್ತರ ಪ್ರದೇಶ: ಅಪರಿಚಿತರ ಗುಂಡಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿ

ಉತ್ತರ ಪ್ರದೇಶದ ಮುಹಮ್ಮದಾಬಾದ್ ಗ್ರಾಮದಲ್ಲಿ ಇಂದು ಅಪರಿಚಿತರು ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಾವ್: ಉತ್ತರ ಪ್ರದೇಶದ ಮುಹಮ್ಮದಾಬಾದ್ ಗ್ರಾಮದಲ್ಲಿ ಇಂದು ಅಪರಿಚಿತರು ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೃತನನ್ನು ಗ್ರಾಮದ ಮಾಜಿ ಮುಖ್ಯಸ್ಥ ಬಿಜ್ಲಿ ಯಾದವ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ವಾಯುವಿಹಾರ ನಡೆಸುತ್ತಿದ್ದಾಗ ಮೊಬೈಕ್ ನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

 ಈ ಸುದ್ದಿ ತಿಳಿದು ಬಿಜ್ಲಿ ಯಾದವ್ ಕೊಲೆಯಾದ ಸ್ಥಳಕ್ಕೆ ಆಗಮಿಸಿದ ನೂರಾರು ಸಂಖ್ಯೆಯ ಅವರ ಅಭಿಮಾನಿಗಳು, ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಿಜ್ಲಿ ಯಾದವ್ ಹತ್ಯೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com