ಉದ್ದಂಪುರ ಸೇನಾ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ಕರ್ನಾಟಕದ ಯೋಧ ಸೇರಿ ಇಬ್ಬರು ಹುತಾತ್ಮ!

ಉದ್ಧಂಪುರದ ಸುಯಿ ಗ್ರಾಮದಲ್ಲಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಕರ್ನಾಟಕ ಯೋಧ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ.
ಭಾರತೀಯ ಯೋಧರು
ಭಾರತೀಯ ಯೋಧರು

ಉದ್ದಂಪುರ(ಜಮ್ಮ ಮತ್ತು ಕಾಶ್ಮೀರ): ಉದ್ಧಂಪುರದ ಸುಯಿ ಗ್ರಾಮದಲ್ಲಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಕರ್ನಾಟಕ ಯೋಧ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ. 

ಯಾವುದೋ ವಿಷಯ ಸಂಬಂಧ ಸಿಡಿಮಿಡಿಗೊಂಡ ಯೋಧನೋರ್ವ ಸಹ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಕರ್ನಾಟಕದ ಯೋಧ ಬಿಎನ್ ಮೂರ್ತಿ ಮತ್ತು ಮೊಹಮ್ಮದ್ ತಸ್ಲೀಂ ಎಂಬ ಯೋಧರು ಹುತಾತ್ಮರಾಗಿದ್ದಾರೆ. 

ಗುಂಡಿನ ದಾಳಿಯಲ್ಲಿ ಮತ್ತೋರ್ವ ಯೋಧ ಸಂಜಯ್ ತಾಲಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಕುರಿತಂತೆ ಮಾಹಿತಿ ಸಿಕ್ಕ ತಕ್ಷಣ ಹಿರಿಯ ಅಧಿಕಾರಿಗಳು ಕ್ಯಾಂಪ್ ಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com