ಸಿಎಎ ವಿರೋಧಿ ಸಭೆಗೆ ಶಿವಸೇನೆ ಗೈರು: ರಾಹುಲ್, ಅಹ್ಮದ್ ಪಟೇಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ! 

ಪೌರತ್ವ ತಿದ್ದುಪಡಿ ವಿರೋಧಿಸುವ ಪ್ರತಿಪಕ್ಷಗಳ ಸಭೆಗೆ ಶಿವಸೇನೆ ಗೈರಾಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ರಾಹುಲ್ ಗಾಂಧಿ, ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದಾರೆ. 
ಸಿಎಎ ವಿರೋಧಿ ಸಭೆಗೆ ಶಿವಸೇನೆ ಗೈರು: ರಾಹುಲ್, ಅಹ್ಮದ್ ಪಟೇಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ!
ಸಿಎಎ ವಿರೋಧಿ ಸಭೆಗೆ ಶಿವಸೇನೆ ಗೈರು: ರಾಹುಲ್, ಅಹ್ಮದ್ ಪಟೇಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ!

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಪ್ರತಿಪಕ್ಷಗಳ ಸಭೆಗೆ ಶಿವಸೇನೆ ಗೈರಾಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ರಾಹುಲ್ ಗಾಂಧಿ, ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದಾರೆ. 

ರಾಹುಲ್ ಗಾಂಧಿ ಭೇಟಿಗೂ ಮುನ್ನ ಆದಿತ್ಯ ಠಾಕ್ರೆ ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿ ರಾಜ್ಯದ ಸಮ್ಮಿಶ್ರ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು.
 
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ-ಆದಿತ್ಯ ಠಾಕ್ರೆ ಭೇಟಿ ಮಾಡಿದ್ದು ಸಿಎಎ ಹಾಗೂ ಎನ್ ಪಿಆರ್ ಬಗ್ಗೆಯೂ ಮಾತನಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com