ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 25 ಮಂದಿಗೆ ಗಾಯ

ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.
ಹಳಿ ತಪ್ಪಿದ ರೈಲು
ಹಳಿ ತಪ್ಪಿದ ರೈಲು

ಭುವನೇಶ್ವರ: ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.

ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು ನೀರ್ಗುಂಡಿ  ಮಧ್ಯಭಾಗದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಆರು ಜನರು ಗಂಭೀರವಾಗಿದ್ದಾರೆಂದು ವರದಿಯಾಗಿದೆ.

ಸ್ಥಳದಲ್ಲಿ ಮಂಜು ಕವಿದಿತ್ತು. ಇದರಿಂದಾಗಿ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ವರದಿಯಾಗಿದೆ. ರಕ್ಷಣಾ ಕಾರ್ಯ ಆರಂಭವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com