ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ! 

ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 
ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ!
ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ!

ರಾಯ್ ಬರೇಲಿ: ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

ಜ.04 ರಂದು ಈ ಹತ್ಯೆ ಸಂಭವಿಸಿದೆ. ಆದರೆ ಜ.14 ರಂದು ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಘಟನೆಗೆ ಸಾಕ್ಷಿಯಾಗಿದ್ದ ಸಂತ್ರಸ್ತೆ ಊರ್ಮಿಳಾ ಅವರ ಹಿರಿಯ ಮಗಳು ತಾಯಿಯ ತವರುಮನೆಗೆ ತೆರಳಿ ಘಟನೆಯನ್ನು ವಿವರಿಸಿದ್ದಾಳೆ. ಈ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. 

ಕುಟುಂಬ ಸದಸ್ಯರ ದೂರನ್ನು ಆಧರಿಸಿ ಪೊಲೀಸರು ಹತ್ಯೆಯ ಆರೋಪಿ ರವೀಂದ್ರ ಕುಮಾರ್ (35) ನ್ನು ಬಂಧಿಸಿದ್ದಾರೆ. ಆರೋಪಿ ರವೀಂದ್ರ ಕುಮಾರ್ ಮತ್ತು ಊರ್ಮಿಳಾ 2011 ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದರೆ ರವೀಂದ್ರ ಕುಮಾರ್ ಮನೆಯಲ್ಲಿ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಈ ಬಾರಿಯೂ ಊರ್ಮಿಳ ಹೆಣ್ಣುಮಗುವಿಗೆ ಜನ್ಮ ನೀಡಬಹುದೆಂದು ಶಂಕಿಸಿ ಆಕೆಯನ್ನು ಹತ್ಯೆ ಮಾಡಿ ದೇಹ, ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿ, ದಹನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಿಕ್ಕ ಸಾಕ್ಶ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com