ಏಪ್ರಿಲ್ 1ರಿಂದ ಎನ್'ಪಿಆರ್ ಆರಂಭ: ತಪ್ಪು ಮಾಹಿತಿ ನೀಡಿದವರಿಗೆ ರೂ.1000 ದಂಡ

ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. 

ಈ ಕುರಿತು ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ನಾಗರೀಕತ್ವ ನಿಯಮ-17ರ ಪ್ರಕಾರ ತಪ್ಪು ಮಾಹಿತಿ ನೀಡಿದವರಿಗೆ ರೂ.1 ಸಾವಿರ ದಂಡ ಹಾಕಲು ಅವಕಾಶವಿದೆ ಎಂದು ಹೇಳಿದೆ. ಆದರೆ, 2011 ಹಾಗೂ 2015ರಲ್ಲಿ ನಡೆದ ಎನ್'ಪಿಆರ್ ಪ್ರಕ್ರಿಯೆ ವೇಳೆ ಈ ನಿಯಮವನ್ನು ಹೆಚ್ಚು ಬಳಕೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. 

ಇತ್ತೀಚೆಗೆ ನಡೆದ ಎನ್'ಪಿಆರ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲೇಖಕಿ ಅರುಂಧತಿ ರಾಯ್ ಅವರು, ಎನ್'ಪಿಆರ್ ಗಣತಿದಾರರು ನಿಮ್ಮ ಮನೆಗೆ ಬಂದರೆ ಅವರಿಗೆ ತಪ್ಪು ಮಾಹಿತಿ ನೀಡಿ. ನಿಮ್ಮ ಹೆಸರನ್ನು ರಂಗಾ-ಬಿಲ್ಲಾ, ಕುಂಗ್ ಫು-ಕಟ್ಟಾ ಎಂದು ಬರೆಸಿರಿ ಎಂದು ಕರೆ ನೀಡಿದ್ದರು. ಈಗಾಗಲೇ ಎನ್'ಪಿಆರ್'ಗೆ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಬಹಿಷ್ಕಾರ ಹಾಕಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com