ಒಡಿಶಾದಲ್ಲಿ ಭೀಕರ ಅಪಘಾತ: ರಸ್ತೆ ಕಾಮಗಾರಿ ನಡೆಸುತ್ತಿದ್ದ ಐವರು ಮಹಿಳಾ ಕಾರ್ಮಿಕರು ಸಾವು

ದುರ್ಘಟನೆಯೊಂದರಲ್ಲಿ ಕಾರೊಂದು ರಸ್ತೆ ವಿಭಜಕ ದಾಟಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಬುಧವಾರ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರೂರ್ಕೆಲಾ: ದುರ್ಘಟನೆಯೊಂದರಲ್ಲಿ ಕಾರೊಂದು ರಸ್ತೆ ವಿಭಜಕ ದಾಟಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಬುಧವಾರ ನಡೆದಿದೆ. 

ಸುಂದರ್ ಗಡ್ ಜಿಲ್ಲೆಯ ರಾಜ್‍ರಂಗ್‍ಪುರ್ ಸಮೀಪ ರಮಬಹಾಲ್ ಚಾಕ್ ನ ಬಿಜು ಎಕ್ಸ್ ಪ್ರೆಸ್ ವೇ ನಲ್ಲಿ ಇಂದು ಈ ಘಟನೆ ನಡೆದಿದೆ. 

ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ರೂರ್ಕೆಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಗಾಯಗೊಂಡ ಏಳು ಜನರನ್ನು ರೂರ್ಕೆಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನೆ ನಡೆದಾಗ ಕಾರು ಸುಂದರ್ ಗಡ್‍ನಿಂದ ರೂರ್ಕೆಲಾಗೆ ಸಾಗುತ್ತಿತ್ತು. ವೇಗವಾಗಿ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರ್‍ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಕೆಲಸದಲ್ಲಿ ನಿರತರಾಗಿದ್ದ ಕೂಲಿ ಕಾರ್ಮಿಕರ ಮೇಲೆ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com