ಲಖನೌ: ಬಿಎಸ್ ಪಿ ನಾಯಕಿ ಮಾಯಾವತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸವಾಲನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ.
ಸಿಎಎ ಪರವಾಗಿ ಲಖನೌ ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಮಾಯಾವತಿ ಅವರನ್ನು ಸಿಎಎ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದರು.
ಅಮಿತ್ ಶಾ ಸವಾಲನ್ನು ಸ್ವೀಕರಿಸಿರುವುದಾಗಿ ಹೇಳಿರುವ ಮಾಯಾವತಿ, ಯಾವುದೇ ಸಾರ್ವಜನಿಕ ವೇದಿಕೆ, ಯಾವುದೇ ಸ್ಥಳದಲ್ಲಿಯೂ ತಾವು ಚರ್ಚೆಗೆ ಸಿದ್ಧವಿರುವುದಾಗಿ ಹೇಳಿದ್ದಾರೆ.
Advertisement