ಉಗ್ರಾತಂಕ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಆಚರಣೆ: ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ

ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆರಂಭವಾಗುವ ರಾಜಪಥದಿಂದ ಇಂಡಿಯಾ ಗೇಟ್ ವರೆಗೆ ಸುಮಾರಿ 8 ಕಿಲೋ ಮೀಟರ್ ಗಣರಾಜ್ಯೋತ್ಸವದ ಪರೇಡ್ ನಡೆಯಲಿದೆ. ಈ ಪ್ರೇದಶದಲ್ಲಿ 5 ಕಿಮೀ ಸುತ್ತಲೂ ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾಗಿದ್ದು, ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ದೆಹಲಿಯಲ್ಲಿ ಒಟ್ಟು 22 ಸಾವಿರ ಪೊಲೀಸರನ್ನು ನಿಯೋಜನೆಗೊಳಿಸಲಾಗಿದ್ದು, ರಾಜಪಥದ ಸುತ್ತ 10 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದಾರೆ. 

ವೇದಿಕೆ ಸುತ್ತ ಎನ್ಎಸ್'ಜಿ, ಎಸ್'ಜಿಪಿ, ಐಟಿಬಿಪಿ ಭದ್ರತಾ ಪಡೆಗಳನ್ನು ಹಲವು ಸುತ್ತಿನಲ್ಲಿ ನಿಯೋಜಿಸಲಾಗಿದೆ. ಸುಲಭ ಸಂಚಾರಕ್ಕೆ 2 ಸಾವಿರ ಟ್ರಾಫಿಕ್ ಪೊಲೀಸರನ್ನು ನೇಮಕ  ಮಾಡಲಾಗಿದ್ದು, 150 ಉನ್ನತ ತಂತ್ರಜ್ಞಾನದ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಎತ್ತರದ ಕಟ್ಟಡಗಳಲ್ಲಿ ಶಾರ್ಪ್ ಶೂಟರ್ ಗಳನ್ನು ನೇಮಕ ಮಾಡಿದ್ದು, ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನವನ್ನೂ ಕೂಡ ಬಳಕೆ ಮಾಡಿಕೊಳ್ಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com