ನಿತೀಶ್ ಕುಮಾರ್ ಸುಳ್ಳುಗಾರ: ಜೆಡಿಯು ನಾಯಕನ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಜೆಡಿಯು ಉಪಾಧ್ಯಕ್ಷ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು ಸುಳ್ಳುಗಾರನೆಂದು ಆರೋಪಿಸಿದ್ದಾರೆ. 
ನಿತೀಶ್ ಕುಮಾರ್ ಸುಳ್ಳುಗಾರ: ಜೆಡಿಯು ನಾಯಕನ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
ನಿತೀಶ್ ಕುಮಾರ್ ಸುಳ್ಳುಗಾರ: ಜೆಡಿಯು ನಾಯಕನ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಪಾಟ್ನಾ: ಜೆಡಿಯು ಉಪಾಧ್ಯಕ್ಷ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು ಸುಳ್ಳುಗಾರನೆಂದು ಆರೋಪಿಸಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಲಹೆ ಮೇರೆಗೆ ಪ್ರಶಾಂತ್ ಕಿಶೋರ್ ನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು ಎಂದು ನಿತೀಶ್ ಕುಮಾರ್ ಹೇಳಿದ್ದರು. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ಕಿಶೋರ್ ಇದು ಸುಳ್ಳು ಎಂದು ಹೇಳಿದ್ದಾರೆ. 

ಪ್ರಶಾಂತ್ ಕಿಶೋರ್ ಹೆಸರು ಹೇಳದೆಯೇ ಮಾತನಾಡಿದ್ದ ನಿತೀಶ್ ಕುಮಾರ್, ಒಬ್ಬರು ಪತ್ರ ಬರೆದಿದ್ದರು, ನಾನು ಅದಕ್ಕೆ ಪ್ರತಿಕ್ರಿಯೆ ನೀಡಿದ್ದೇನೆ, ಯಾರೋ ಒಬ್ಬರು ಟ್ವೀಟ್ ಮಾಡಿದ್ದಾರೆ ಮಾಡಿಕೊಳ್ಳಲಿ, ಅದಕ್ಕೆ ನಾನೇನು ಮಾಡಲಿ? ಅವರಿಗೆ ಬೇಕಾಗುವವರೆಗೂ ಜೆಡಿಯು ನಲ್ಲಿ ಮುಂದುವರೆಯಬಹುದು. ಬೇಡವಾದಲ್ಲಿ ಪಕ್ಷ ತೊರೆಯಬಹುದು. ಅವರು ಹೇಗೆ ಪಕ್ಷಕ್ಕೆ ಸೇರ್ಪಡೆಯಾದರೆಂದು ಗೊತ್ತೇ? ಅಮಿತ್ ಶಾ ಹೇಳಿದ್ದರು ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ವಾಗ್ದಾಳಿ ನಡೆಸಿದ್ದರು. 

ಜೆಡಿಯು ನಾಯಕನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ಕಿಶೋರ್, ನನ್ನನ್ನು ಏಕೆ ಹಾಗು ಹೇಗೆ ಪಕ್ಷಕ್ಕೆ ಸೇರಿದೆ ಎಂಬುದರ ಬಗ್ಗೆ ಸುಳ್ಳು ಹೇಳಿದ್ದೀರಿ.. ನೀವು ನಿಜ ಹೇಳುತ್ತಿದ್ದರೆ ಅಮಿತ್ ಶಾ ಶಿಫಾರಸು ಮಾಡಿರುವವರ ಮಾತನ್ನು ಕೇಳದೇ ಇರುವ ಧೈರ್ಯ ನಿಮಗೆ ಇನ್ನೂ ಇದೆ ಎಂಬುದನ್ನು ಯಾರು ನಂಬುತ್ತಾರೆ ಎಂದು ಪ್ರಶಾಂತ್ ಕಿಶೋರ್ ನಿತೀಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸಿಎಎ ಯನ್ನು ಬೆಂಬಲಿಸುವ ಜೆಡಿಯು ನಿಲುವಿಗೆ ಪ್ರಶಾಂತ್ ಕಿಶೋರ್ ವಿರೋಧ ವ್ಯಕ್ತಪಡಿಸಿದ್ದರು. 2015 ರಲ್ಲಿ ಜೆಡಿಯುನಲ್ಲಿ ನಂಬಿಕೆ ಇಟ್ಟಿದ್ದ ಜನರಿಗಾಗಿ ಜೆಡಿಯು ಗಮನ ನೀಡಬೇಕೆಂದು ಪ್ರಶಾಂತ್ ಕಿಶೋರ್ ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com