ಉತ್ತರ ಪ್ರದೇಶ: ಗುಡುಗು, ಮಿಂಚಿಗೆ 23 ಮಂದಿ ಬಲಿ, 29 ಮಂದಿಗೆ ಗಾಯ

ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಕ್ನೊ: ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ.

ಅಲಹಾಬಾದ್ ಜಿಲ್ಲೆಯಲ್ಲಿ 8 ಮಂದಿ, 6 ಮಂದಿ ಮಿರ್ಜಾಪುರದಲ್ಲಿ, ಬಡೊಹಿ ಜಿಲ್ಲೆಯಲ್ಲಿ 6 ಮಂದಿ, ಕೌಶಂಬಿ ಜಿಲ್ಲೆಯಲ್ಲಿ ತಲಾ ಇಬ್ಬರು ಮತ್ತು ಒಬ್ಬರು ಜೌನ್ಪುರ್ ಜಿಲ್ಲೆಯಲ್ಲಿ ಗುಡುಗು, ಮಿಂಚಿನಿಂದ ಮೃತಪಟ್ಟಿದ್ದಾರೆ.

ಪ್ರಯಾಗ್ ರಾಜ್ ಜಿಲ್ಲೆಯಲ್ಲಿ 9 ಮಂದಿ, ಮಿರ್ಜಾಪುರದಲ್ಲಿ 10 ಮಂದಿ, ನಾಲ್ವರು ಕೌಶಂಬಿಯಲ್ಲಿ ಗುಡುಗು, ಮಿಂಚು ತಾಗಿ ತೀವ್ರ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.

ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಆತಂಕ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com