ಭುವನೇಶ್ವರ್: ಬಾಲಸೋರ್ ಸಂಸದ ಮತ್ತು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಅವರು ತಮ್ಮ ನವದೆಹಲಿಯ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಕಳೆದ ವಾರ ಕೊರೋನಾ ಸೋಂಕಿತ ಒಡಿಶಾ ಶಾಸಕನ ಜೊತೆ 2 ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು. ಹೀಗಾಗಿ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಪ್ರತಾಪ್ ಸಾರಂಗಿ ಟ್ವೀಟ್ ಮಾಡಿದ್ದಾರೆ.
ಕೊರೋನಾ ಸೋಂಕಿತ ನೀಲಗಿರಿ ಕ್ಷೇತ್ರದ ಶಾಸಕ ಸುಕಂಟಾ ಕುಮಾರ್ ನಾಯಕ್ ಅವರೊಂದಿಗೆ ಜುಲೈ 2 ಮತ್ತು 3 ರಂದು ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು.
Advertisement