ಹೈದರಾಬಾದ್: ಸಚಿವಾಲಯ ಕಟ್ಟಡ ನೆಲಸಮಗೊಳಿಸಿ ಅಲ್ಲಿ ನೂತನ ಕಟ್ಟಣ ನಿರ್ಮಾಣಕ್ಕೆ ಮುಂದಾಗಿರುವ ತೆಲಂಗಾಣ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ತೆಲಂಗಾಣ ಸಚಿವಾಲಯ ಕಟ್ಟಡ ನೆಲಸಮ ಕಾರ್ಯಕ್ಕೆ ತೆಲಂಗಾಣ ಹೈಕೋರ್ಟ್ ಜುಲೈ 13ರವರೆಗೂ ತಡೆ ನೀಡಿದೆ. ಸುಮಾರು 10ಲಕ್ಷ ಅಡಿಗಳಲ್ಲಿ ಕಟ್ಟಲಾಗಿರುವ ಸಚಿವಾಲಯವನ್ನು ತೆಲಂಗಾಣ ಸರ್ಕಾರ 3 ದಿನಗಳಿಂದ ನೆಲಸಮ ಮಾಡುವ ಕಾರ್ಯ ಮಾಡುತ್ತಿದೆ. ಇದೇ ಜಾಗದಲ್ಲಿ ಹೊಸದಾಗಿ ಕಟ್ಟಡ ಕಟ್ಟಲು ರೂಪುರೇಷೆ ಸಿದ್ಧಪಡಿಸಿದೆ.
ಇದೀಗ ಸರ್ಕಾರದ ನಡೆಗೆ ಹೈಕೋರ್ಟ್ ಆದೇಶದಿಂದ ಹಿನ್ನಡೆಯಾಗಿದೆ. ಈ ಕುರಿತು ಪ್ರೊಫೆಸರ್ ಪಿ ಎಲ್ ವಿಶ್ವೇಶ್ವರ ರಾವ್ ಮತ್ತು ಡಾ ಚೆರುಕು ಸುಧಾಕರ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯಲ್ಲಿ ಸರ್ಕಾರ ಕಾನೂನನ್ನು ಸರಿಯಾಗಿ ಪಾಲಿಸದೇ ಕಟ್ಟಡವನ್ನು ನೆಲಸಮ ಮಾಡುತ್ತಿದೆ ಎಂದು ಆರೋಪಿಸಿದ್ದರು.
ಸರ್ಕಾರದ ಕಾಯ್ದೆ ನಿರ್ಮಾಣ ಮತ್ತು ಉರುಳಿಸುವಿಕೆ ತ್ಯಾಜ್ಯ ನಿರ್ವಹಣಾ ನಿಯಮಗಳು 2016, ಸಾಂಕ್ರಾಮಿಕ ರೋಗಗಳ ಕಾಯ್ದೆ, 1897 ಮತ್ತು ಪರಿಸರ ಸಂರಕ್ಷಣಾ ಕಾಯ್ದೆ 1986 ರ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಸರ್ಕಾರ ನಿರ್ಮಾಣ ಮತ್ತು ಕಟ್ಟಡ ತ್ಯಾಜ್ಯ ನಿರ್ವಹಣಾ ನಿಯಮಗಳು 2016, ಸಾಂಕ್ರಾಮಿಕ ರೋಗಗಳ ಕಾಯ್ದೆ, 1897 ಮತ್ತು ಪರಿಸರ ಸಂರಕ್ಷಣಾ ಕಾಯ್ದೆ 1986 ರ ನಿಬಂಧನೆಗಳನ್ನು ಗಾಳಿಗೆ ತೂರಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಹೀಗಾಗಿ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ ವಿಜಯ್ಸೆನ್ ರೆಡ್ಡಿ ಅವರು ನೆಲಸಮ ಕಾರ್ಯಕ್ಕೆ ಜುಲೈ 13ರವರೆಗೂ ತಡೆ ನೀಡಿದ್ದಾರೆ.
Advertisement