ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!

ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.
ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!
ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!

ಲಖನೌ: ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.

ಕಾನ್ಪುರದಲ್ಲಿ ಪೊಲೀಸ್ ಸಿಬ್ಬಂದಿಗಳ ಮಾರಣಹೋಮಕ್ಕೆ ಕಾರಣವಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಿ ಪೊಲೀಸ್ ಕಾವಲಿನಲ್ಲಿ  ಕರೆದೊಯ್ಯುತ್ತಿದ್ದಾಗ ಜು.10 ರಂದು ಬೆಳಿಗ್ಗೆ ಎನ್ ಕೌಂಟರ್ ಮಾಡಲಾಗಿದೆ. 

ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಯಿತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಇದ್ದ ಗನ್ ನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಪೊಲೀಸರು ಆತನನ್ನು ಸುತ್ತುವರೆದು ಶರಣಾಗುವಂತೆ ಎಚ್ಚರಿಸಿದರಾದರೂ ಆತ ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ. ಈ ವೇಳೆ ದುಬೆಯನ್ನು ಎನ್ ಕೌಂಟರ್ ಮಾಡಬೇಕಾಗಿ ಬಂತು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಎನ್ ಕೌಂಟರ್ ಗೂ ಅರ್ಧ ಗಂಟೆ ಮುನ್ನ ಚಿತ್ರೀಕರಿಸಿರುವ ವಿಡಿಯೋದಲ್ಲಿ, ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರ್ ನ್ನು ಹಿಂಬಾಲಿಸುವುದಕ್ಕೆ  ಮಾಧ್ಯಮ ಸಿಬ್ಬಂದಿಗಳಿಗೆ ನಿರ್ಬಂಧ ವಿಧಿಸಿರುವುದು ಬೆಳಕಿಗೆ ಬಂದಿದೆ.

ಇದನ್ನೇ ಪ್ರತಿಪಕ್ಷಗಳ ನಾಯಕರೂ ಸಹ ಪ್ರಶ್ನಿಸುತ್ತಿದ್ದು, ಎನ್ ಕೌಂಟರ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com