ಪಾಟ್ನಾ: ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ.
ದುರಂತಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ.
ದುರಂತದ ಈ ಸಮಯದಲ್ಲಿ ದುಃಖತಪ್ತ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ನಿಂತಿದೆ ಎಂದಿರುವ ನಿತೀಶ್ ಕುಮಾರ್, ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕಿದ್ದು, ಮನೆಗಳಲ್ಲೇ ಇರುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ, ವಿಪತ್ತು ನಿರ್ವಹಣಾ ಇಲಾಖೆ ಕಾಲ ಕಾಲಕ್ಕೆ ನೀಡುತ್ತಿರುವ ಸಲಹೆಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.
Advertisement