ನವದೆಹಲಿ: ಟೀಂ ಇಂಡಿಯಾದ ಕ್ರಿಕೆಟಿಗರೊಬ್ಬರು ಕರ್ನಾಟಕದ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ವ್ಯಾಪಕ ವೈರಲ್ ಆಗಿದೆ.
ಹೌದು.. ಟೀಂ ಇಂಡಿಯಾದ ಟರ್ಬೊನೇಟರ್ ಹರ್ಭಜನ್ ಸಿಂಗ್ ಮತ್ತೆ ಕರ್ನಾಟಕವನ್ನು ನೆನೆಪು ಮಾಡಿಕೊಂಡಿದ್ದು, ಸಾಲು ಮರದ ತಿಮ್ಮಕ್ಕ ಅವರ ಫೋಟೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿಕೊಂಡು, ‘ಇವರು ಇಲ್ಲಿಯವರೆಗೂ 73 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಇವರ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಕೇವಲ ಒಂದೇ ಒಂದು ಸಸಿಯನ್ನಾದರೂ ನಾವು ನೆಡೋಣ. ಧನ್ಯವಾದಗಳು ಅಜ್ಜಿ’ ಎಂದು ಹರ್ಭಜನ್ ಟ್ವಿಟ್ ಮಾಡಿದ್ದಾರೆ.
ಹೀಗೆ ಹರ್ಭಜನ್ ತಿಮ್ಮಕ್ಕ ಅವರ ಫೋಟೋ ಹಾಕಿಕೊಳ್ಳುತ್ತಿದ್ದಂತೆ, ಸಾಕಷ್ಟು ಕನ್ನಡಿಗರು ಅವರ ಬಗ್ಗೆ ಟ್ವಿಟ್ ಮಾಡುವ ಮೂಲಕವೇ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಪದ್ಮಶ್ರೀ ಪ್ರಶಸ್ತಿ ಪಡೆದ ಹೆಮ್ಮೆಯ ಕನ್ನಡಿಗರು ಎಂದು ಕೆಲವರು ಕಮೆಂಟ್ ಮಾಡಿದರೆ, ನಿಮ್ಮ ಈ ಒಂದು ಟ್ವಿಟ್ನಿಂದ ಕರ್ನಾಟಕದ ತಿಮ್ಮಕ್ಕ ವಿಶ್ವಖ್ಯಾತಿ ಪಡೆದುಕೊಳ್ಳಲಿದ್ದಾರೆ. ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ.
Advertisement