ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ಪ್ರತಿಪಕ್ಷ ಬಿಜೆಪಿ ನಿಯೋಗವೊಂದು ರಾಜಸ್ಥಾನ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಇಂದು ಸಂಜೆ ಭೇಟಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮತ್ತು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ರ ಕಟಾರಿಯಾ ನೇತೃತ್ವದಲ್ಲಿನ ನಿಯೋಗ ಜೈಪುರದಲ್ಲಿನ ರಾಜಭವನಕ್ಕೆ ಆಗಮಿಸಿದ್ದು, ರಾಜ್ಯ ಪಾಲರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದೆ.
ರಾಜ್ಯದಲ್ಲಿ ಕೋವಿಡ್- 19 ಹರಡುವಿಕೆಯಿಂದ ಏರ್ಪಟ್ಟಿರುವ ಪರಿಸ್ಥಿತಿ ಕುರಿತಂತೆ ರಾಜ್ಯಪಾಲರೊಂದಿಗೆ ಚರ್ಚೆ ನಿಯೋಗ ಚರ್ಚೆ ನಡೆಸುತ್ತಿರುವುದಾಗಿ ಪಕ್ಷದ ವಕ್ತಾರರೊಬ್ಬರು ತಿಳಿಸಿದ್ದಾರೆ.
Advertisement