social_icon

ಅನ್ ಲಾಕ್ 3.0: ಅಂತಾರಾಷ್ಟ್ರೀಯ ವಿಮಾನ ಸೇವೆ, ಸಿನಿಮಾ, ಮೆಟ್ರೋ ರೈಲು ಪುನರ್ ಆರಂಭಕ್ಕೆ ಎಫ್ ಐಸಿಸಿಐ ಸಲಹೆ

ಅನ್ ಲಾಕ್ 2.0 ಜುಲೈ 31ಕ್ಕೆ ಕೊನೆಯಾಗಲಿದ್ದು, 3.0ದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ, ಮೆಟ್ರೋ ರೈಲು, ಚಿತ್ರಮಂದಿರ ಹಾಗೂ ಮೆಲ್ಟಿಪ್ಲೆಕ್ಸ್ ಗಳನ್ನು ತೆರೆಯುವಂತೆ ಕೈಗಾರಿಕಾ ಒಕ್ಕೂಟ ಎಫ್ ಐಸಿಸಿಐ ಸರ್ಕಾರಕ್ಕೆ ಸಲಹೆ ನೀಡಿದೆ.

Published: 27th July 2020 04:57 PM  |   Last Updated: 27th July 2020 04:57 PM   |  A+A-


flight1

ವಿಮಾನದ ಚಿತ್ರ

Posted By : Nagaraja AB
Source : The New Indian Express

ನವದೆಹಲಿ: ಅನ್ ಲಾಕ್ 2.0 ಜುಲೈ 31ಕ್ಕೆ ಕೊನೆಯಾಗಲಿದ್ದು, 3.0ದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ, ಮೆಟ್ರೋ ರೈಲು, ಚಿತ್ರಮಂದಿರ ಹಾಗೂ ಮೆಲ್ಟಿಪ್ಲೆಕ್ಸ್ ಗಳನ್ನು ತೆರೆಯುವಂತೆ ಕೈಗಾರಿಕಾ ಒಕ್ಕೂಟ ಎಫ್ ಐಸಿಸಿಐ ಸರ್ಕಾರಕ್ಕೆ ಸಲಹೆ ನೀಡಿದೆ.

ಸ್ಥಳೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರ್ ಆರಂಭಿಸುವ ಬಗ್ಗೆಯೂ ಕೈಗಾರಿಕಾ  ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ. 

ಭಾರತೀಯ ಮತ್ತು ವಿದೇಶಿ ವಿಮಾನಗಳಿಗೆ ಎರಡು ರಾಷ್ಟ್ರಗಳ ನಡುವೆ ಸಂಚರಿಸಲು ಅವಕಾಶ ಕಲ್ಪಿಸಬೇಕು, ಹೋಟೆಲ್ , ರೆಸ್ಟೋರೆಂಟ್ ಗಳು, ಚಿತ್ರಮಂದಿರ, ಮೆಟ್ರೋ ರೈಲು ಸೇವೆಯನ್ನು ಆರಂಭಿಸಬೇಕೆಂದು ಚೆಂಬರ್ಸ್ ಸಲಹೆ ನೀಡಿದೆ.

ಕೋವಿಡ್-19 ಪರಿಣಾಮದಿಂದಾಗಿ ಇಡೀ ಜಗತ್ತು ಹೋರಾಡುತ್ತಿರುವಂತೆಯೇ ಧೀರ್ಘಕಾಲಿನ ಲಾಕ್ ಡೌನ್, ಆರ್ಥಿಕತೆಗೆ ಸಮರ್ಥನೀಯವಲ್ಲಾ ಎಂದು ಎಫ್ ಐಸಿಸಿಐ ಉಲ್ಲೇಖಿಸಿದೆ.

ದೇಶದ ಹಲವೆಡೆ ಭಾಗಶ: ಲಾಕ್ ಡೌನ್ ಆದೇಶ ಇನ್ನೂ ಮುಂದುವರೆದಿದ್ದು,ವ್ಯವಹಾರ, ಜನರ ದೈನಂದಿನ ಬದುಕು  ದುಸ್ತರವಾಗಿದೆ.
ಕೋವಿಡ್-19 ಭೀತಿಯನ್ನು ಗಮನದಲ್ಲಿಟ್ಟುಕೊಂಡು ಆನ್ ಲಾಕ್ 3-0ನಲ್ಲಿ ನಿರ್ಬಂಧಗಳನ್ನು ತೆಗೆಯಬೇಕಾಗಿದೆ. ವಿಮಾನ, ಕ್ರೀಡೆ ಮತ್ತಿತರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬೇಕಾಗಿದೆ. ಕೋವಿಡ್-19 ನೆಗೆಟಿವ್ ವರದಿಯ ಪ್ರಮಾಣ ಪತ್ರ ಸ್ವೀಕರಿಸುವ ಮೂಲಕ ವಿದೇಶಿಗರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ ಎಂದು ಚೆಂಬರ್ಸ್ ಸಲಹೆ ನೀಡಿದೆ.

ಶೇ. 50 ಆಸನ ಸಾಮರ್ಥ್ಯ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತಿತರ ಮುಂಜಾಗ್ರತಾ ಕ್ರಮದೊಂದಿಗೆ ಬಾರ್ ಗಳು, ರೆಸ್ಟೋರೆಂಟ್ ಗಳು, ಹೋಟೆಲ್ ಗಳಲ್ಲಿ ಅವಕಾಶ ಮಾಡಿಕೊಡಬೇಕು, ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮೆಟ್ರೋ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು.ಕಟ್ಟುನಿಟ್ಟಾದ ಮಾರ್ಗಸೂಚಿ ಪಾಲನೆಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಎಫ್ ಐಸಿಸಿಐ ಸಲಹೆ ನೀಡಿದೆ.


Stay up to date on all the latest ದೇಶ news
Poll
Rahul Dravid

ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಕಾಂಟ್ರ್ಯಾಕ್ಟ್ ವಿಸ್ತರಿಸುವ ಬಿಸಿಸಿಐ ನಿರ್ಧಾರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp