ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ದಿನ ಪ್ರಾಯೋಗಿಕವಾಗಿ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ

ಕೊರೋನಾ ವೈರಸ್ ಲಾಕ್'ಡೌನ್ ಪರಿಣಾಮ ಮಾ,.20ರಿಂದ ಭಕ್ತರ ಪಾಲಿಗೆ ಬಂದ್ ಆಗಿದ್ದ ತಿರುಮಲದ ವೆಂಕಟೇಶ್ವರ ದೇವಾಲಯ ಜೂನ್.8ರಿಂದು ಬಾಗಿಲು ತೆರೆಯಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುಪತಿ: ಕೊರೋನಾ ವೈರಸ್ ಲಾಕ್'ಡೌನ್ ಪರಿಣಾಮ ಮಾ.20ರಿಂದ ಭಕ್ತರ ಪಾಲಿಗೆ ಬಂದ್ ಆಗಿದ್ದ ತಿರುಮಲದ ವೆಂಕಟೇಶ್ವರ ದೇವಾಲಯ ಜೂನ್.8ರಿಂದು ಬಾಗಿಲು ತೆರೆಯಲಿದೆ. 

ದೇವಾಲಯ ಬಾಗಿಲು ತೆರೆದ ಮೊದಲಿನ 3 ದಿನ ಪ್ರಾಯೋಗಿಕವಾಗಿ ಕೇವಲ ಸಿಬ್ಬಂದಿಗೆ ವೆಂಕಟೇಶನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. 

ಕೊರೋನಾ ವೈರಸ್ ಹರಡುವಿಕೆಗಾಗಿ ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗಿದೆ. ಪ್ರತಿ ಭಕ್ತರ ನಡುವೆ 6 ಅಡಿ ಅಂತರ ಇರುವಂತೆ ಸರದಿ ಸಾಲನ್ನು ನಿಯೋಜಿಸಲಾಗುತ್ತದೆ. ಜೂನ್8 ರಿಂದ 2-3 ದಿನ ಕೇವಲ ದೇಗುಲ ಸಿಬ್ಬಂದಿಗೆ ಈ ಮಾದರಿಯಲ್ಲಿ ಸರದಿ ಸಾಲಿನಲ್ಲಿ ಆಗಮಿಸುವಂತೆ ಅವಕಾಶ ನೀಡಿ ದರ್ಶನ ಮಾಡಿಸಲಾಗುತ್ತದೆ ಎಂದು ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಮಂಗಳವಾರ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com