ಗಡಿಯಲ್ಲಿ ಯಶಸ್ವಿ ಕಾರ್ಯಾಚರಣೆ: 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಗಡಿಯಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಇಂದು ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಹೊಡೆದುರುಳಿಸಿದೆ. 
ಭಾರತೀಯ ಸೇನೆ
ಭಾರತೀಯ ಸೇನೆ

ಶೋಪಿಯಾನ್(ಜಮ್ಮು ಮತ್ತು ಕಾಶ್ಮೀರ): ಗಡಿಯಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಇಂದು ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಹೊಡೆದುರುಳಿಸಿದೆ. 

ಶೋಪಿಯಾನ್ ನ ರೆಬಾನ್ ನಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು ಪಾಕ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 5 ಉಗ್ರರನ್ನು ಹೊಡೆದುರುಳಿಸಿರುವುದಾಗಿ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ. 

ಸತತ 6 ಗಂಟೆಗಳ ಕಾಲ ನಡೆದ ಯಶಸ್ವಿ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆಗಳಿಗೆ ಯಾವುದೇ ಹಾನಿಯಾಗಿಲ್ಲ. ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಯಿದ್ದೀನ್ ಕಮಾಂಡರ್ ಫಾರೂಕ್ ಅಸಾದ್ ಹಾಗೂ ವಿದೇಶಿ ಪ್ರಜೆಗಳಾದ ಉಗ್ರರನ್ನು ಹತ್ಯೆಗೈಯಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com