ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್ ನಿಂದ ಇಬ್ಬರು ಪಾಸಿಟಿವ್ ಕೈದಿಗಳು ಪರಾರಿ

ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಔರಂಗಬಾದ್: ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಈ ಇಬ್ಬರು ಕೈದಿಗಳು ಭಾನುವಾರ ತಡ ರಾತ್ರಿ ಕಿಟಕಿಯ ಗ್ರಿಲ್‌ಗಳನ್ನು ಬಾಗಿಸಿ ಬೆಡ್‌ಶೀಟ್‌ಗಳನ್ನು ಹಗ್ಗಗಳಂತೆ ಕಟ್ಟಿ ತಮ್ಮ ಕೋಣೆಯಿಂದ ಕೆಳಗಿಳಿದು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಜೈಲಿನ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಬೇಗಂಪುರ ಪೊಲೀಸ್ ಠಾಣೆಯಲ್ಲಿ ಕೈದಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಅಲ್ಲದೆ ಕೈದಿಗಳ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ತಪ್ಪಿಸಿಕೊಂಡ ಈ ಇಬ್ಬರು ಕೈದಿಗಳು ಸೇರಿದಂತೆ ಹರ್ಸುಲ್ ಜೈಲಿನ 29 ವಿಚಾರಣಾಧೀನ ಕೈದಿಗಳಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಈ ಎಲ್ಲಾ ಕೈದಿಗಳನ್ನು ಚಿಕಿತ್ಸೆಗಾಗಿ ಕೊವಿಡ್ ಕೇರ್ ಸೆಂಟರ್ ಗೆ ಕಳುಹಿಸಲಾಗಿತ್ತು.

Related Stories

No stories found.

Advertisement

X
Kannada Prabha
www.kannadaprabha.com