ದೆಹಲಿಯಲ್ಲಿ ಕೊರೋನಾ ಆರ್ಭಟ: 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಸಿದ್ಧತೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಸತತ ಎರಡನೇ ದಿನವೂ ಎರಡು ಸಾವಿರ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ದೆಹಲಿ ಸರ್ಕಾರ ಸೋಂಕಿತರಾಗಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಸಿದ್ಧತೆ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಸತತ ಎರಡನೇ ದಿನವೂ ಎರಡು ಸಾವಿರ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ದೆಹಲಿ ಸರ್ಕಾರ ಸೋಂಕಿತರಾಗಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಸಿದ್ಧತೆ ನಡೆಸಿದೆ.

ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್ ನಲ್ಲಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಆಪ್ ಸರ್ಕಾರ ಸಿದ್ಧತೆ ನಡೆಸಿದ್ದು, ಜೂನ್ ಅಂತ್ಯಕ್ಕೆ ನಿರ್ಮಾಣ ಕಾರ್ಯ ಮುಗಿಯಲಿದೆ ಎಂದು ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕಾರ್ಯದರ್ಶಿ ವಿಕಾಸ್ ಸೇತಿ ಅವರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿಯಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ದೆಹಲಿಯ ಎಲ್ಲಾ ಮಹಾನಗರ ಪಾಲಿಕೆಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರು ಭಾನುವಾರ ಸಂಜೆ 6 ಗಂಟೆಗೆ ಸಂವಾದ ನಡೆಸಲಿದ್ದಾರೆ.

ಈ ಸಭೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಲ್ಲದೆ, ಉತ್ತರ, ಪೂರ್ವ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್‌ಗಳ ಮೇಯರ್‍ ಗಳು ಮತ್ತು ಆಯುಕ್ತರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಗೃಹಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಮತ್ತು ಕೇಂದ್ರ ಆರೋಗ್ಯ ಸಚಿವರು ಸನ್ನದ್ಧತೆಯನ್ನು ಪರಿಶೀಲಿಸಲಿದ್ದು, ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com